ಪೋಸ್ಟ್‌ಗಳು

ಮೇ, 2026 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರಿಂದ ಅಗ್ರಹ

ಇಮೇಜ್
     ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರಿಂದ ಅಗ್ರಹ   ಯಳಂದೂರು :  ಇಲ್ಲಿನ ಕಾಂಗ್ರೆಸ್ ಕಚೇರಿ ಮುಂಭಾಗ ಸಾಕಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್  ಕಾರ್ಯಕರ್ತರು ಸೇರಿ ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣ ಮೂರ್ತಿ ಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡಿದ್ದಾರೆ . ರಾಜ್ಯದಲ್ಲಿಯೇ ಮೀಸಲು ಕ್ಷೇತ್ರದಿಂದ ಅತ್ಯಧಿಕ ಮತಗಳನ್ನು ಪಡೆದು ಆಯ್ಕೆಯಾಗಿರುವ   ಪ್ರಾಮಾಣಿಕ ದಕ್ಷ ಆಡಳಿತಗಾರರಾಗಿದ್ದ ದಿವಂಗತ ಶ್ರೀ ಬಿ ರಾಚಯ್ಯನವರ ಪುತ್ರ  ಎ ಆರ್ ಕೃಷ್ಣಮೂರ್ತಿಯವರಿಗೆ ಮುಂಬರುವ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಚಿವರನ್ನಾಗಿ  ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಚ್ ವಿ ಚಂದ್ರು ಒತ್ತಾಯ ಮಾಡಿದರು.  ಕಾಂಗ್ರೆಸ್ ಹೈಕಮಾಂಡ್ ಹಾಗೂ  ಕೆಪಿಸಿಸಿ ಅಧ್ಯಕ್ಷರು ಮತ್ತು ಸಂಭಾವ್ಯ ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇವೆ..   ಶಾಸಕರಾದ  ಎ ಆರ್ ಕೃಷ್ಣಮೂರ್ತಿಯವರು ಮೈಸೂರು ಮತ್ತು ಬೆಂಗಳೂರು ವಿಭಾಗದಲ್ಲಿ ತನ್ನದೇಯಾದ ವರ್ಚಸ್ಸು ಹೊಂದಿದ್ದು ಚಾಮರಾಜನಗರ ಜಿಲ್ಲೆಯ ನಾಡಿಮಿಡಿತ ಅರಿತವರಾಗಿದ್ದಾರೆ ಇವರಿಗೆ ರಕ್ತಗತವಾಗಿ ಆಡಳಿತಾತ್ಮಕ ಅನುಭವವಿದ್ದು,ಇವರು ದಕ್ಷತೆ ಮತ್ತು ಪ್ರಾಮಾಣಿಕತೆವುಳ್ಳ ಜನಪರ ರಾಜಕಾರಣಿಯಾಗಿದ್ದಾರೆ ಎಂದು ತಿಳಿಸಿದರು . ನಂತರ ಕಂದಹಳ್ಳಿ ನಂಜುಂಡ ಸ್ವಾಮಿ ಮಾತನಾಡಿ...

ಶಾಸಕ ಎ ಆರ್ ಕೃಷ್ಣ ಮೂರ್ತಿಯವರಿಗೆ ಸಚಿವ ಸ್ಥಾನಕ್ಕೆ ಅಗ್ರಹ

ಇಮೇಜ್
  ಶಾಸಕ ಎ ಆರ್ ಕೃಷ್ಣ ಮೂರ್ತಿಯವರಿಗೆ ಸಚಿವ ಸ್ಥಾನಕ್ಕೆ ಅಗ್ರಹ  ಸಂತೇಮರಹಳ್ಳಿ : ಇಡೀ ರಾಜ್ಯದಲ್ಲಿಯೇ ಮೀಸಲು ಕ್ಷೇತ್ರದಿಂದ ಅತ್ಯಧಿಕ ಮತಗಳನ್ನು ಪಡೆದು ಆಯ್ಕೆಯಾಗಿರುವ ಹಾಗೂ ರಾಜಕೀಯ ಅಜಾತಶತ್ರು ಪ್ರಾಮಾಣಿಕ ದಕ್ಷ ಆಡಳಿತಗಾರರಾಗಿದ್ದ ದಿವಂಗತ ಶ್ರೀ ಬಿ ರಾಚಯ್ಯನವರ ಮಗನಾದ ಶ್ರೀ ಎ ಆರ್ ಕೃಷ್ಣಮೂರ್ತಿಯವರಿಗೆ ಮುಂಬರುವ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಚಿವರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ಮತ್ತು ಸಂಭಾವ್ಯ ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇವೆ..  ಮಾನ್ಯ ಶಾಸಕರಾದ ಶ್ರೀ ಎ ಆರ್ ಕೃಷ್ಣಮೂರ್ತಿಯವರು ಮೈಸೂರು ಮತ್ತು ಬೆಂಗಳೂರು ವಿಭಾಗದಲ್ಲಿ ತನ್ನದೇಯಾದ ವರ್ಚಸ್ಸು ಹೊಂದಿದ್ದು ಚಾಮರಾಜನಗರ ಜಿಲ್ಲೆಯ ನಾಡಿಮಿಡಿತ ಅರಿತವರಾಗಿದ್ದಾರೆ ಇವರಿಗೆ ರಕ್ತಗತವಾಗಿ ಆಡಳಿತಾತ್ಮಕ ಅನುಭವವಿದ್ದು,ಇವರು ದಕ್ಷತೆ ಮತ್ತು ಪ್ರಾಮಾಣಿಕತೆವುಳ್ಳ ಜನಪರ ರಾಜಕಾರಣಿಯಾಗಿದ್ದಾರೆ.. ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ತೊಡಗಿಸಿಕೊಂಡಿರುವ ಇವರನ್ನು ಸಚಿವರನ್ನಾಗಿ ಮಾಡುವ ಮೂಲಕ ಚಾಮರಾಜನಗರ ಜಿಲ್ಲಾ ಕೇಂದ್ರವಾದ ನಂತರ ಇದುವರೆಗೆ ಒಮ್ಮೆಯೂ ದಲಿತ ಸಮುದಾಯಕ್ಕೆ ಸೇರಿದ ಶಾಸಕರುಗಳಿಗೆ ಸಚಿವರಾಗುವ ಅವಕಾಶ ಸಿಕ್ಕಿರುವುದಿಲ್ಲ ಅಲ್ಲದೆ  ಕೊಳ್ಳೇಗಾಲ ಕ್ಷೇತ್ರದ ಯಾವೊಬ್ಬ ಜನಪ್ರತಿನಿಧಿಯೂ ಇದುವರೆಗೆ ಸಚಿವರಾಗಿಲ್ಲದಿರುವ ಕೊರತೆಯನ್ನು ನೀಗಿಸುವ ಸಲುವಾಗಿ ಬೇಕಾಗಿರುವ ಈ ಎಲ್ಲಾ ಹಿನ್ನೆಲೆಯನ...