ಪೋಸ್ಟ್‌ಗಳು

ಚಾಮುಂಡೇಶ್ವರಿ ತಾಯಿಯ ಜನ್ಮೋತ್ಸವ ಆಚರಣೆ.

ಇಮೇಜ್
  ಚಾಮುಂಡೇಶ್ವರಿ ತಾಯಿಯ ಜನ್ಮೋತ್ಸವ ಆಚರಣೆ. ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ  ಚಾಮುಂಡೇಶ್ವರಿ ತಾಯಿ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ಜನ್ಮದಿನೋತ್ಸವದ ಪ್ರಯುಕ್ತ ವಿಶೇಷ ಧಾರ್ಮಿಕ  ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿದವು... ತಾಯಿಗೆ ಮುಂಜಾನೆ ದೇವಿಗೆ ವಿಶೇಷ ದ್ರವ್ಯ ಅಭಿಷೇಕ, ಹಾಗೂ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಈ ವೇಳೆ ಮಹಿಳೆಯರು ತಾಯಿ ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದರು.  ಈ ಹಿನ್ನೆಲೆಯಲ್ಲಿ ಅಕ್ಕ ಪಕ್ಕದ ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಾಯಿಯ ದರ್ಶನ ಪಡೆದು ಆಶೀರ್ವಾದ ಪಡೆದರು..  ಪ್ರತಿ ಪ್ರತಿವರ್ಷವು ತಾಯಿ ಚಾಮುಂಡೇಶ್ವರಿಯ ಜನ್ಮದಿನ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಪ್ರಸಾದ ಸ್ವೀಕರಿಸಿ ತಾಯಿಯ ಕೃಪೆಗೆ ಪಾತ್ರರಾಗುತ್ತಾರೆ.. ಕ್ಷೇತ್ರದ ಶಾಸಕ ಎ ಆರ್ ಕೃಷ್ಣಮೂರ್ತಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷ ಚಂದ್ರು ದೇವಾಲಯಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಭಕ್ತರು ಹಾಗೂ ದಾನಿಗಳು ಪ್ರತಿ ವರ್ಷವೂ ಉದಾರವಾಗಿ ಧನಸಹಾಯ ನೀಡುತ್ತಿದ್ದು, ಅವರ ಸಹಕಾರದಿಂದ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ ಎಂದು ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ........

ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ಇಮೇಜ್
ವರದಿ: ಲಕ್ಕೂರು ಚಂದ್ರು ಶಿವಶರಣ ಹಡಪದ ಅಪ್ಪಣ್ಣ ಜಯಂತಿ  ಗುಂಡ್ಲುಪೇಟೆ  : ತಾಲೂಕಿನ ಬೇಗೂರು ಹೋಬಳಿಯ ಸವಿತಾ ಸಮಾಜ ಬಳಗದ ವತಿಯಿಂದ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಿಸಲಾಯಿತು. ಬೇಗೂರು ಗ್ರಾಮದ ನಾಗಶೆಟ್ಟಿ ಕಾಂಪ್ಲೆಕ್ಸ್ ಆವರಣದಲ್ಲಿ ಸಮಾವೇಶಗೊಂಡ ಬೇಗೂರು ಹೋಬಳಿಯ ಸುತ್ತಮುತ್ತಲ ಗ್ರಾಮಗಳ ಸವಿತಾ ಸಮಾಜ ಬಳಗದ ಕುಲ ಬಾಂಧವರು ಶ್ರೀ ಶಿವಶರಣ  ಹಡಪದ ಅಪ್ಪಣ್ಣ ಅವರ  ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಿಹಿ ಹಂಚಿ ಜಯಂತಿ ಆಚರಿಸಿದರು. ನಂತರ ಸಂಘದ ಅಧ್ಯಕ್ಷರಾದ ಸುರೇಶ್ ಮಾತನಾಡಿ, ಹೋಬಳಿಯ ಸಮಾಜ ಕುಲಬಾಂಧವರು ಒಟ್ಟಾಗಿ ಒಗ್ಗಟ್ಟಿನಿಂದ ಅಪ್ಪಣ್ಣ ಅವರ ಜಯಂತಿಯನ್ನು ಇಂದು ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಸಮಾಜದ ಮೇಲೆ ಬೆಳಕು ಚೆಲ್ಲುವಂತಹ  ವಿವಿಧ ಕಾರ್ಯಕ್ರಮಗಳನ್ನು  ಹಮ್ಮಿಕೊಳ್ಳಲಾಗುವುದು ಹಾಗೂ  ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು  ಅಂಕ ಪಡೆದ ವಿದ್ಯಾರ್ಥಿಗಳನ್ನು  ಸನ್ಮಾನಿಸಲಾಗುವುದು ಎಂದರು. ಸವಿತಾ ಸಮಾಜದ ಕುಲಬಾಂಧವರಿಗೆ ರಾಜಕೀಯ ಸ್ಥಾನಮಾನ ಕಲ್ಪಿಸುವಂತೆ ಆಗ್ರಹಿಸಿ  ಬೇಗೂರು ಹೋಬಳಿ ಕೇಂದ್ರದಲ್ಲಿ  ಸವಿತಾ ಸಮಾಜದ ಸಭೆ ಸಮಾರಂಭ, ಅಪ್ಪಣ್ಣ ಅವರ ಜಯಂತಿ ಹಾಗೂ ವಿವಿಧ ಕಾರ್ಯಕ್ರಮಗಳಿಗಾಗಿ  ಸಮುದಾಯ ಭವನ ನಿರ್ಮಿಸಿ ಕೊಡುವಂತೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ರವರಲ್ಲಿ ಮನವಿ ಮಾಡಿದ್ದು ಮುಂದಿನ ದಿನಗಳಲ್ಲಿ  ಸಮು...

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಪಡೆದ ಬೇಗೂರು ಗ್ರಾಮದ ದರ್ಶಿತ್.ಎಸ್

ಇಮೇಜ್
  ವರದಿ: ಲಕ್ಕೂರು ಚಂದ್ರು ಗುಂಡ್ಲುಪೇಟೆ: ಚನ್ನಪಟ್ಟಣದಲ್ಲಿ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ ಶಿಪ್ 2026 ರ ಕಥಾ ವಿಭಾಗದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದ ಪ್ರತಿಭೆ ದರ್ಶಿತ್ ಎಸ್ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಚೆಸ್ಕಾಂ ಸೋಮಣ್ಣ ಮತ್ತು ದೀಪ ದಂಪತಿಗಳ ಪುತ್ರನಾದ ದರ್ಶಿತ್ ಕಠಿಣ ತರಬೇತಿಯೊಂದಿಗೆ ಈ ಸಾಧನೆ ಮಾಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಸ್ಪರ್ಧಿಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನ ಪಡೆದು ಟ್ರೋಫಿ ಗೆದ್ದಿದ್ದಾರೆ. ಈ ಸಾಧನೆಗೆ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ದರ್ಶಿತ್ ಅವರ ಈ ಗೆಲುವು ಇಡೀ ತಾಲ್ಲೂಕಿಗೆ ಸ್ಪೂರ್ತಿಯಾಗಿದೆ. G1 ನ್ಯೂಸ್ ವತಿಯಿಂದ ದರ್ಶಿತ್ ಹಾಗೂ ಸಾಧನೆಗೆ ಸಹಕಾರ ನೀಡಿದ ಕುಟುಂಬಕ್ಕೆ ಅಭಿನಂದನೆಗಳು💐💐 ನಿಮ್ಮ ಧ್ವನಿ ನಮ್ಮ ಸುದ್ದಿ 📢 G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ.

ಇಮೇಜ್
ವರದಿ:ಗೂಳಿಪುರ ಮಣಿಕಂಠ ನಾಯಕ್  ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ.  ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹಿಂಪಡೆಯುವಂತೆ ಮಲ್ಲು ಯರಗಂಬಳ್ಳಿ, ಆಗ್ರಹ ಚಾಮರಾಜನಗರ : ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.      ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ವಿಯಂತ್ರಣ ಸಮಿತಿ, ತಮಿಳುನಾಡು ಮುಖ್ಯಮಂತ್ರಿ ವಿಜಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.    ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3.500 ಕ್ಯೂಸೆಕ್‌ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.      ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನ...

ವಯೋನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ.

ಇಮೇಜ್
  ವರದಿ: ಲಕ್ಕೂರು ಚಂದ್ರು   ವಯೋನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ. ಗುಂಡ್ಲುಪೇಟೆ : ಪಟ್ಟಣದ ಕುರುಬಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿ, ವಯೋನಿವೃತ್ತಿ ಹೊಂದಿದ ಬಿ. ಸಿ. ಸಿದ್ದರಾಜು ಅವರನ್ನು ಕರ್ನಾಟಕ ಕಾವಲು ಪಡೆ ಸಂಘಟನೆಯ ವತಿಯಿಂದ, ಶುಭ ಹಾರೈಸಿ, ಗೌರವಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲೂಕು ಅಧ್ಯಕ್ಷ ಎ.ಅಬ್ದುಲ್ ಮಾಲಿಕ್, ತಾಲೂಕು ಕಾರ್ಯದರ್ಶಿ ಎಸ್.ಮುಬಾರಕ್, ಜಿಲ್ಲಾ ಕಾರ್ಯಧ್ಯಕ್ಷ ಅಬ್ದುಲ್ ರಷೀದ್, ಸೇರಿದಂತೆ ಹಲವು ಶಾಲೆಯ ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು. ನಿಮ್ಮ ಧ್ವನಿ ನಮ್ಮ ಸುದ್ದಿ 📢 G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಶಿಕ್ಷಣವು ಪ್ರತಿಯೊಬ್ಬರ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ: ಶಾಂತು ಆರ್ ಬೆಳ್ಳಿ

ಇಮೇಜ್
ಶಿಕ್ಷಣವು ಪ್ರತಿಯೊಬ್ಬರ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ: ಶಾಂತು ಆರ್ ಬೆಳ್ಳಿ. ಕೊಳ್ಳೇಗಾಲ, ಆ. 01: ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಿಲ್ಕಲ್ ಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಿದ ಕೊಳ್ಳೇಗಾಲ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಶಾಂತು ಆರ್ ಬೆಳ್ಳಿ ರವರು ಮಾತನಾಡಿ ಶಿಕ್ಷಣವು ಪ್ರತಿಯೊಬ್ಬರ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣ ಹಂತದಲ್ಲಿಯೇ ಶಿಸ್ತು, ಪರಿಶ್ರಮ ಮತ್ತು ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಚಿತ ನೋಟ್‌ಬುಕ್‌ಗಳನ್ನು ಪಡೆದ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಿವಮಾಧು , ರಾಜೇಂದ್ರ ಸಾಮ್ರಾಟ್, ಶಿಕ್ಷಕಿ ಮಂಗಳ, ಹಾಗೂ. ನಟರಾಜು , ಅತಿಥಿ ಶಿಕ್ಷಕಿ ಮನಿಷಾ ಎಸ್.ಆರ್.ಬೆಳ್ಳಿ, ಗೌತಮ್ ಉಪಸ್ಥಿತರಿದ್ದರು. ನಿಮ್ಮ ಧ್ವನಿ ನಮ್ಮ ಸುದ್ದಿ 📢 G1 NEWS Honnur - ಜನರ ಪರ ಸಮಸ...

ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ಇಮೇಜ್
ವರದಿ: ಲಕ್ಕೂರು ಚಂದ್ರು   ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ. ಗುಂಡ್ಲುಪೇಟೆ : ಪಟ್ಟಣದ ಜೆಎಸ್ಎಸ್ ಪದವಿ ಕಾಲೇಜಿನ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ವಿವಿಧ ಇಲಾಖೆಗಳು ಹಾಗೂ ಜೆಎಸ್ಎಸ್ ಕಾಲೇಜಿನ ಸಂಯುಕ್ತಶ್ರಯದಲ್ಲಿ  ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾದೀಶ ಈಶ್ವರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಭಾಷಣ ಮಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಗಮನ ಹರಿಸಬೇಕು. ಹದಿನೆಂಟು ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ವಿವಾಹ ಮಾಡಬಾರದು. ಗಂಡು ಮಕ್ಕಳಿಗೆ 21 ವರ್ಷದ ಒಳಗೆ ವಿವಾಹ ಮಾಡಬಾರದು  ಎಂದರು. ಬಾಲ್ಯ ವಿವಾಹ, ವೇಶ್ಯಾವಾಟಿಕೆ, ಅಂಗಾಂಗಗಳ ಕಳ್ಳಸಾಗಾಣೆ, ಬಲವಂತದ ದುಡಿಮೆ, ಹಾಗೂ ಲೈಂಗಿಕ ಶೋಷಣೆಯಂತಹ ಕೃತ್ಯಗಳು ಮಾನವ ಕಳ್ಳ ಸಾಗಾಣಿಕೆಯ ರೂಪಗಳಾಗಿವೆ. ಇವೆಲ್ಲವನ್ನೂ ತಡೆಗಟ್ಟಲು ಭಾರತೀಯ ನ್ಯಾಯ ಸಂಹಿತೆ, ಮಕ್ಕಳ ರಕ್ಷಣಾ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಸೇರಿದಂತೆ ಹಲವು ಕಾನೂನುಗಳು ಜಾರಿಯಲ್ಲಿವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಗುಂಡ್ಲುಪೇಟೆ ಎರಡು ರಾಜ್ಯಗಳ ಗಡಿ ಭಾಗವಾದ್ದರಿಂದ ಉದ್ಯೋಗದ ಆಮಿಷವನ್ನು ...

ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರಿಂದ ಪ್ರತಿಭಟನೆ.

ಇಮೇಜ್
  ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರಿಂದ ಪ್ರತಿಭಟನೆ  ಸಂತೇಮರಹಳ್ಳಿ : ಇಲ್ಲಿನ ವೃತ್ತದಲ್ಲಿ   ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ನೂರಾರು ಸಂಖ್ಯೆಯಲ್ಲಿ ರೈತರು ಜಮಾಯಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ರೈತ ಸಂಘದ ಅಧ್ಯಕ್ಷ ಬಸವಣ್ಣ ಮಾತನಾಡಿ ರಾಜ್ಯ ಸರ್ಕಾರ ಕದ್ದು ಮುಚ್ಚಿ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಬಿಟ್ಟು ರೈತರ ಬಾಯಿಗೆ ಮಣ್ಣು ಹಾಕುವ ಕೆಲಸಕ್ಕೆ ಮಾಡುವುದು ಖಂಡನೀಯ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.  ಈಗಾಗಲೇ ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರು ಸಂಕಷ್ಟಕ್ಕೆ ಸಿಲುಕಿದರು ತಮಿಳು ನಾಡಿಗೆ ನೀರು ಹರಿಸುವುದನ್ನು ಮೊದಲು ನಿಲ್ಲಿಸಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ರೈತರು ಟೈರ್ ಗೆ ಬೆಂಕಿ ಹಚ್ಚುವ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಘಂಟೆ ರವಾನಿಸಿದ್ದಾರೆ. ಕಾವುದವಾಡಿ ನಾಗೇಶ್ ಮಾತನಾಡಿ ರಾಜ್ಯಕ್ಕೆ ಭರಬಂದು ಬಾವಿಗಳಲ್ಲಿ ನೀರಿಲ್ಲದೆ ಕೆರೆಕಟ್ಟೆಗಳು ಒಣಗುತ್ತಿದ್ದರು ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ನಮ್ಮ ಕರ್ನಾಟಕ ಸರ್ಕಾರ ತಮಿಳು...

ಯಳಂದೂರಿನಲ್ಲಿ ಅದ್ಧೂರಿಯಾಗಿ ನಡೆದ ಬಸವ ಜಯಂತಿ ಮಹೋತ್ಸವ

ಇಮೇಜ್
ಯಳಂದೂರಿನಲ್ಲಿ ಅದ್ಧೂರಿಯಾಗಿ ನಡೆದ  ಬಸವ ಜಯಂತಿ ಮಹೋತ್ಸವ ಯಳಂದೂರು, ಜು. 25: ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು, ಜಗಜ್ಯೋತಿ ಶ್ರೀ ಬಸವೇಶ್ವರರ 893ನೇ ಜಯಂತಿ ಅಂಗವಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಬಸವ ಜಯಂತಿ ಆಚರಣಾ ಸಮಿತಿ ಹಾಗೂ ಬಸವ ಬಳಗಗಳ ಒಕ್ಕೂಟ, ಯಳಂದೂರು ತಾಲ್ಲೂಕು ವತಿಯಿಂದ ಶನಿವಾರ ಆಯೋಜಿಸಿದ್ದ ಬಸವ ಜಯಂತಿ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಬಸವ ಅನುಯಾಯಿಗಳು, ಹಳ್ಳಿಕಾರ್ ಹೋರಿಗಳು, ಎತ್ತಿನಗಾಡಿಗಳು, ಟ್ರ್ಯಾಕ್ಟರ್‌ಗಳು ಹಾಗೂ ಆಟೋಗಳಲ್ಲಿ ಶ್ರೀ ಬಸವೇಶ್ವರರು ಮತ್ತು ಶರಣರ ಭಾವಚಿತ್ರಗಳನ್ನು ಪುಷ್ಪಾಲಂಕೃತ ಪಲ್ಲಕ್ಕಿಗಳಲ್ಲಿ ತಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು. ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ನಂದಿ ಧ್ವಜ ಹಾಗೂ ಶ್ರೀ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು.  ಬಳಿಕ ಆಶೀರ್ವಚನ ನೀಡಿ, ಬಸವಣ್ಣನವರು ಸಾರಿದ ಸಮಾನತೆ, ಸೌಹಾರ್ದತೆ ಮತ್ತು ಕಾಯಕದ ತತ್ವಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿವೆ. "ವಚನಗಳು ಕೇವಲ ಓದುವುದಕ್ಕಲ್ಲ, ಬದುಕುವುದಕ್ಕೆ" ಎಂದು ಹೇಳಿದ ಅವರು, ಯುವಜನತೆ ಬಸವ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ...

ಬೆಲ್ಲ ಉತ್ಪಾದನೆ ಕುರಿತು ಪಿಎಚ್.ಡಿ. ಪಡೆದ ಕೆಂಪನಪುರ ಮಹದೇವಸ್ವಾಮಿಗೆ ಬಸವಪರ ಸಂಘಟನೆಗಳಿಂದ ಸನ್ಮಾನ

ಇಮೇಜ್
 ಚಾಮರಾಜನಗರ ಜುಲೈ 22: ತಾಲ್ಲೂಕಿನ ಕೆಂಪನಪುರ ಗ್ರಾಮದ ಡಾ.ಮಹದೇವಸ್ವಾಮಿ ರವರು ಅಲೆಮನೆ ವ್ಯವಸ್ಥೆಗೆ ಸಂಬಂಧಿಸಿದ ಸಂಶೋಧನೆಯ ಮೂಲಕ ಪಿ ಎಚ್ ಡಿ ಪಡೆದ ಚಾಮರಾಜನಗರದ ಸಿದ್ದಾರ್ಥ ಕಾಲೇಜು ಪ್ರಾಂಶುಪಾಲ ಡಾ. ಮಹದೇವಸ್ವಾಮಿ ರವರನ್ನು ಪ್ರಮುಖರು ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಿದರು  ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಪಂಡಿತರು ಹಾಗೂ ಎಮ್ ಸಿ ಎಸ್ ಶಾಲೆಯ ಮುಖ್ಯೋಪಾಧ್ಯಾಯರಾದ ಮಹಾದೇವಸ್ವಾಮಿ ಅವರು ಚಾಮರಾಜನಗರ ಜಿಲ್ಲೆಯ ಪ್ರಮುಖ ಕೃಷಿ ಆಧಾರಿತ ಉತ್ಪನ್ನವಾದ ಬೆಲ್ಲ ಉತ್ಪಾದನೆ ಕುರಿತು ಪಿ ಎಚ್ ಡಿ ಪಡೆದಿರುವುದು ಇಡೀ ಜಿಲ್ಲೆಯ ಹೆಮ್ಮೆ ಹಾಗೂ ಸಂತಸದ ವಿಷಯವಾಗಿದೆ ಎಂದು ಹೇಳಿದರು ಡಾಕ್ಟರ್ ಮಹದೇವಸ್ವಾಮಿ ಕೆಂಪನಪುರ ಅವರು ಕೃಷಿ ಪ್ರಧಾನ ಕುಟುಂಬದಲ್ಲಿ ಜನಿಸಿ ಬೆಳೆದವರಾಗಿದ್ದು ಇಂದಿಗೂ ಕೃಷಿಯನ್ನೇ ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡಿದ್ದಾರೆ ತಮ್ಮ ಜೀವನಾನುಭವ, ರೈತರ ಬದುಕಿನೊಂದಿಗೆ ಇರುವ ನಿಕಟ ಬಾಂಧವ್ಯ ಹಾಗೂ ಅಲೆಮನೆಗಳಲ್ಲಿ ಬೆಲ್ಲ ತಯಾರಿಕೆಯ ಅನುಭವವನ್ನು ಸಂಶೋಧನೆಯ ವಿಷಯವನ್ನಾಗಿ ಆಯ್ಕೆ ಮಾಡಿಕೊಂಡಿರುವುದು ತಿಳಿಸಿದರು ಬೆಲ್ಲ ಉತ್ಪಾದನೆಯಲ್ಲಿ ಎದುರಾಗುವ ಸವಾಲುಗಳು, ಉತ್ಪಾದನಾ ವಿಧಾನಗಳು, ಗುಣಮಟ್ಟ ಸುಧಾರಣೆ, ಮಾರುಕಟ್ಟೆ ಸಮಸ್ಯೆಗಳು, ಅವುಗಳಿಗೆ ಅಗತ್ಯವಾದ ಪರಿಹಾರೋಪಾಯಗಳು ಕುರಿತು ನಡೆಸಿರುವ ಅಧ್ಯಯನವು ಮುಂದಿನ ಪೀಳಿಗೆಗೆ ರೈತ ಸಮುದಾಯಕ್ಕೆ ಹಾಗೂ ಸರ್ಕಾರದ ನೀತಿ ರೂಪಿಸುವ ಪ್ರಕ್ರಿಯೆಗೆ ಉಪಯೋಗ ಮ...

ರೇಷ್ಮೆ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಆದಾಯ ಗಳಿಸಿ ರೇಣುಕೇಶ್ ಕರೆ.

ಇಮೇಜ್
ವರದಿ: ಗೂಳಿಪುರ ಮಣಿಕಂಠ ನಾಯಕ್  ರೇಷ್ಮೆ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಆದಾಯ ಗಳಿಸಿ ರೇಣುಕೇಶ್ ಕರೆ. ಬೇಗೂರು: ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ (SVYM) ವಿವೇಕ ಗ್ರಾಮೀಣ ಜೀವನಧಾರ ಕೇಂದ್ರ, ಕುದೇರು ರೇಷ್ಮೆ ಕೃಷಿ ತರಬೇತಿ ಸಂಸ್ಥೆ, ರೇಷ್ಮೆ ಇಲಾಖೆ ಹಾಗೂ ಟೈಟನ್ ಕಂಪನಿ ಲಿಮಿಟೆಡ್ ಸಹಯೋಗದಲ್ಲಿ ರೇಷ್ಮೆ ಕೃಷಿ ಬೆಳೆಗಾರರಿಗಾಗಿ ಮೂರು ದಿನಗಳ ತರಬೇತಿ ಕಾರ್ಯಗಾರಕ್ಕೆ ಸೋಮವಾರ ದಂದು ಗುಂಡ್ಲುಪೇಟೆ ತಾಲೂಕಿನ ಬೇಗೂರು ಸರ್ಕಾರಿ ಐಟಿಐ ಕಾಲೇಜ್ ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾ ಪಂಚಾಯಿತಿ ರೇಷ್ಮೆ ಇಲಾಖೆ ಉಪ ನಿರ್ದೇಶಕ ರೇಣುಕೇಶ್ ಉದ್ಘಾಟಿಸಿ ಮಾತನಾಡಿ ರೇಷ್ಮೆ ಕೃಷಿಗೆ ಸರ್ಕಾರದಿಂದ ವಿವಿಧ ಸೌಲಭ್ಯಗಳು ಹಾಗೂ ಪ್ರೋತ್ಸಾಹ ದೊರೆಯುತ್ತಿದ್ದು ರೈತರು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವೈಜ್ಞಾನಿಕ ಪದ್ಧತಿಯಲ್ಲಿ ರೇಷ್ಮೆ ಕೃಷಿ ಕೈಗೊಂಡರೆ ಉತ್ತಮ ಆದಾಯ ಗಳಿಸಬಹುದು ಎಂದು ತಿಳಿಸಿದರು. ರೈತರಿಗೆ ಇಲಾಖೆಯಿಂದ ನಿರಂತರವಾಗಿ ತಾಂತ್ರಿಕ ಮಾರ್ಗದರ್ಶನ ನೀಡಲಾಗುತ್ತಿದ್ದು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್  ಮತ್ತು ರೇಷ್ಮೆ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಇಂತಹ ತರಬೇತಿಗಳು ರೈತರ ಅಭಿವೃದ್ಧಿಗೆ ಪೂರಕವಾಗಿದೆ ಎಂದರು, ತರಬೇತಿಯಲ್ಲಿ ಭಾಗವಹಿಸಿರುವ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನ ವೈಜ್ಞಾನಿಕ ಬೇಸಾಯ ಪದ್ಧತಿ ಹಾಗೂ ರೇಷ್ಮೆ ಉತ್ಪಾದನೆ ಹೆಚ್...

ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕೂ ವಿಭಾಗದ ನೂತನ ಅಧ್ಯಕ್ಷರಾಗಿ ಡಿ ಕೆಂಪಯ್ಯ ಆಯ್ಕೆ.

ಇಮೇಜ್
ವರದಿ:G1 ನ್ಯೂಸ್  ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕೂ ವಿಭಾಗದ ನೂತನ ಅಧ್ಯಕ್ಷರಾಗಿ ಡಿ ಕೆಂಪಯ್ಯ ಆಯ್ಕೆ.  ಕೊಳ್ಳೇಗಾಲ 21: ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಮಾನ್ಯ ಅಧ್ಯಕ್ಷರಾದ ಡಾಕ್ಟರ್ ಅಭಿಷೇಕ್ ಮನು ಸಿಂಘ್ವಿ ರವರ ಆದೇಶದ ಮೇರೆಗೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ ಕೆ ಹರಿಪ್ರಸಾದ್ ರವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ನೂತನ ಅಧ್ಯಕ್ಷರಾಗಿ ಕೊಳ್ಳೇಗಾಲ ತಾಲೂಕು ವಕೀಲರ ಸಂಘದ ಕಾರ್ಯದರ್ಶಿಗಳಾದ ಸಿಲ್ಕಲ್ಪುರ ಗ್ರಾಮದ ಶ್ರೀ ಡಿ ಕೆಂಪಯ್ಯ ಅವರನ್ನು ನೇಮಕ ಮಾಡಲಾಯಿತು. ಈ ನೇಮಕಾತಿಯು ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ನೀರಿಕ್ಷೆ ಮೂಡಿಸಿದ್ದು ಕಾನೂನು ಹಕ್ಕುಗಳು ಹಾಗೂ ಮಾಹಿತಿ ಹಕ್ಕುಗಳ ಕುರಿತು ಜನಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕರ ಹಕ್ಕುಗಳ ರಕ್ಷಣೆಗೆ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದರು. ನಂತರ ಮಾತನಾಡಿ ಶ್ರೀ ಡಿ ಕೆಂಪಯ್ಯ ರವರು ಮಾತನಾಡಿ ಪಕ್ಷದ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವುದು ಸಂಘಟನೆಯನ್ನು ಮಟ್ಟದಲ್ಲಿ ಇನ್ನಷ್ಟು ಸದೃಢಗೊಳಿಸುವುದು ಹಾಗೂ ಜನಸೇವೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ ಅವರ ನೇಮಕಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿ...

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಜೆಡಿಎಸ್ ನಿಂದ ಶ್ರದ್ಧಾಂಜಲಿ.

ಇಮೇಜ್
ವರದಿ: ಗೂಳಿಪುರ ಮಣಿಕಂಠ ನಾಯಕ್   ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಜೆಡಿಎಸ್ ನಿಂದ ಶ್ರದ್ಧಾಂಜಲಿ.  ಯಳಂದೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿ ಯಳಂದೂರು ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಬಿ ಪುಟ್ಟಸ್ವಾಮಿ ಅಭಿಮಾನಿಗಳ ಬಳಗ ಹಾಗೂ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಯಿತು ಸಭೆಯಲ್ಲಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಎರಡು ನಿಮಿಷಗಳ ಮೌನಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.  ಬಳಿಕ ಮಾತನಾಡಿದ ಮುಖಂಡರಾದ ಸಿದ್ದರಾಜನಾಯಕ ಟೌನ್ ಘಟಕದ ಅಧ್ಯಕ್ಷ ಚಂದ್ರು ಹಾಗೂ ಮದ್ದೂರು ನಿಂಗರಾಜಪ್ಪ ಚೆನ್ನಮ್ಮ ರವರು ಸರಳತೆ, ಸೌಜನ್ಯ ಮತ್ತು ಕುಟುಂಬ ಮೌಲ್ಯಗಳಿಗೆ ಹೆಸರುವಾಸಿಯಾಗಿದ್ದು ಅವರ ಜೀವನ ಎಲ್ಲರಿಗೂ ಮಾದರಿಯಾಗಿದೆ ಎಂದು ಸ್ಮರಿಸಿದರು ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದ್ದು ದೇವೇಗೌಡರ ಕುಟುಂಬದ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ ಎಂದು ಸಂತಾಪ ಸೂಚಿಸಿದರು,  ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಕೆಸ್ತೂರು ಆನಂದ್, ಪ್ರಧಾನ ಕಾರ್ಯದರ್ಶಿ ಅಂಬಳೆ ರವೀಶ್, ಖಜಾಂಚಿ ವೈ ಕೆ ಮೋಳೆ ಸೋಮಣ್ಣ, ಗುರುಲಿಂಗಯ್ಯ, ಜವರಶೆಟ್ಟಿ, ಯರಿಯೂರು ಜಯಣ್ಣ, ಒಡಗೆರೆ ಸುಂದರಣ್ಣ, ಯೋಗೇಂದ್ರ ಲಿಂಗರಾಜು, ಕುದೇರು ಶಂಕರ್, ಉಪ್ಪಿನ ಮೊ...

ಯಳಂದೂರು ಗ್ರೀನ್ ವೇ ರೋಟರಿ 2026 27ನೇ ಸಾಲಿನ ಅಧ್ಯಕ್ಷರಾಗಿ ರೋ. ರಿತೇಶ್ ಎಂ ಎಸ್ ಅಧಿಕಾರ ಸ್ವೀಕಾರ.

ಇಮೇಜ್
ವರದಿ: ಗೂಳಿಪುರ ಮಣಿಕಂಠ ನಾಯಕ್  ಯಳಂದೂರು ಗ್ರೀನ್ ವೇ ರೋಟರಿ 2026 27ನೇ ಸಾಲಿನ ಅಧ್ಯಕ್ಷರಾಗಿ ರೋ. ರಿತೇಶ್ ಎಂ ಎಸ್ ಪದಗ್ರಹಣ.  ಯಳಂದೂರು: ರೋಟರಿ ಸಂಸ್ಥೆ ಯಳಂದೂರು ರೋಟರಿ ಗ್ರೀನ್ ವೇ ವತಿಯಿಂದ 2026-27ನೇ ಸಾಲಿನ ಅಧ್ಯಕ್ಷರಾಗಿ ರೋ. ರಿತೇಶ್ ಎಂ ಎಸ್ ಹಾಗೂ ನೂತನ ಪದಾಧಿಕಾರಿಗಳ ಪದವಿ ಪ್ರಧಾನ ಸಮಾರಂಭವು ಸೋಮವಾರ ಪಟ್ಟಣದ ಶಂಕರ ಭವನದಲ್ಲಿ ಅದ್ದೂರಿಯಾಗಿ ನಡೆಯಿತು ಕಾರ್ಯಕ್ರಮವನ್ನು ಜಿಲ್ಲಾ ಗವರ್ನರ್ 2027-28 ಎಂ ಪಿ ಎಚ್ ಎಫ್ ರೋ. ಯಶಸ್ವಿ ಎಸ್ ಸೋಮಶೇಖರ್ ಅವರು ಉದ್ಘಾಟಿಸಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪದವಿ ಪ್ರಮಾಣವಚನ ಬೋಧಿಸಿದರು. ಸಹಾಯಕ ಗವರ್ನರ್ ಎಂ ಪಿ ಹೆಚ್  ಎಫ್ ರೋ. ವೈ ಹೆಚ್ ಹನುಮಂತೇಗೌಡ ಹಾಗೂ ವಲಯ ಸೇನಾನಿ ಪಿ ಹೆಚ್ ಎಫ್ ರೋ. ಆರ್ ದಕ್ಷಿಣಮೂರ್ತಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು  ನಿಕಟ ಪೂರ್ವ ಅಧ್ಯಕ್ಷರು ರೋ. ನಿರಂಜನಸ್ವಾಮಿ ವೈ ಜಿ ಹಾಗೂ ಕಾರ್ಯದರ್ಶಿ ರೋ. ಪುಟ್ಟರಾಜು ಸಿ ಅವರು ಸ್ವಾಗತಿಸಿದರು ನೂತನ ಕಾರ್ಯದರ್ಶಿ ನಾಗರಾಜು ವೈ ಕೆ ಮೋಳೆ ಅವರು ಅಧಿಕಾರ ಸ್ವೀಕರಿಸಿದರು. 2026-27ನೇ ಸಾಲಿನ ಇತರೆ ಪದಾಧಿಕಾರಿಗಳಾಗಿ ಉಪಾಧ್ಯಕ್ಷರು ರೋ ಶಿವಕುಮಾರ್ ಎನ್, ಖಜಾಂಚಿ ರೋ ಬಂಗಾರಸ್ವಾಮಿ ಆರ್, ದಂಡಯುಧಪಾಣಿ ರೋ.ಮಹದೇವ ಎಸ್ ಅವರು ಆಯ್ಕೆಯಾಗಿದ್ದಾರೆ. ಸಂಘ ಸೇವೆ, ವೃತ್ತಿ ಸೇವೆ ಅಂತರಾಷ್ಟ್ರೀಯ ಸೇವೆ ಮತ್ತು ಯುವಜನ ಸೇವೆಗೆ ಪ್ರತ್ಯೇಕ ನಿರ್ದೇಶಕರನ್ನು ನೇಮಿಸಲಾಗಿದೆ "...

ಹೆಚ್ ಕೆ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ.

ಇಮೇಜ್
ಹೆಚ್ ಕೆ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ. ಕೊಳ್ಳೇಗಾಲ, ಜುಲೈ 17: ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹೆಚ್.ಕೆ. ಟ್ರಸ್ಟ್ ವತಿಯಿಂದ ಕೊಳ್ಳೇಗಾಲ ತಾಲ್ಲೂಕು ಮತ್ತು ಹನೂರು ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶುಕ್ರವಾರ ಸಾಂಕೇತಿಕವಾಗಿ ದೊಡ್ಡಿಂದುವಾಡಿ ಮತ್ತು ಮಂಗಲ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಿದ ಹೆಚ್.ಕೆ ಟ್ರಸ್ಟ್ ಕಾರ್ಯದರ್ಶಿ ರವರಾದ ಪ್ರೇಮಲತಾ ಕ್ರಷ್ಣ ಸ್ವಾಮಿ ರವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವ ಉದ್ದೇಶದಿಂದ ಪ್ರತಿವರ್ಷ ಶಿಕ್ಷಣ ಸಂಬಂಧಿತ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಲಭ್ಯವಾಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಲೆಯ ಮುಖ್ಯ ಶಿಕ್ಷಕರು ಹೆಚ್.ಕೆ. ಟ್ರಸ್ಟ್‌ನ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿ, ವಿದ್ಯಾರ್ಥಿಗಳಿಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವ ಮೂಲಕ ಶಿಕ್ಷಣದ ಮೇಲಿನ ಆಸಕ್ತಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಕಾರ್ಯವನ್ನು ಟ್ರಸ್ಟ್ ಮಾಡುತ್ತಿದೆ ಎಂದು ಮೆಚ್ಚುಗೆ ವ್...

ಜಿಲ್ಲಾಧಿಕಾರಿ ರೂಪ ಹನೂರು ಪ್ರವಾಸ,ದೊಡ್ಡಿಂದುವಾಡಿ ಶಾಲೆ ವೀಕ್ಷಣೆ, ಕುಡಿಯುವ ನೀರು ಸಮಸ್ಯೆ ಪರಿಶೀಲನೆ

ಇಮೇಜ್
ವರದಿ: ಮಣಿಕಂಠ ನಾಯಕ್  ಚಾಮರಾಜನಗರ.ಜುಲೈ17: ಜಿಲ್ಲಾಧಿಕಾರಿ ಶ್ರೀರೂಪ ಅವರು ಹನೂರು ತಾಲ್ಲೂಕಿನ ಮಾರ್ಟಳ್ಳಿ, ಚಂಗಡಿ ಹಾಗೂ ಇನ್ನಿತರ ಗ್ರಾಮಗಳಿಗೆ ಇಂದು ಭೇಟಿ ನೀಡಿ ಕುಡಿಯುವ ನೀರು ಇನ್ನಿತರ ಸಮಸ್ಯೆಗಳನ್ನು ಪರಿಶೀಲಿಸಿದರು. ಜನರೊಂದಿಗೆ ನೇರ ಸಂವಾದ ನಡೆಸಿ ಅಹವಾಲುಗಳನ್ನು ಆಲಿಸಿದರು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಸ್ಥಳೀಯ ಸಾರ್ವಜನಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದು  ವಿವರವಾಗಿ ಪರಿಶೀಲನೆ ನಡೆಸಿದರು. ಮಾರ್ಟಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಸ್ಥಳದಲ್ಲಿದ್ದ ಕಾರ್ಯಪಾಲಕ ಇಂಜಿನಿಯರ್ ಗೆ ನೀರು ಸರಬರಾಜು ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಚಂಗಡಿ ಗ್ರಾಮ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಶೀಘ್ರ  ಪರಿಹಾರ ಕಲ್ಪಿಸಲು  ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಸಾರ್ವಜನಿಕರು ಹಾಗೂ ಗ್ರಾಮದ ಮುಖಂಡರೊಂದಿಗೆ  ಸಂವಾದ ನಡೆಸಿದರು.  ದೊಡ್ಡಿಂದುವಾಡಿ ಗ್ರಾಮದಲ್ಲಿ   ಸಿ ಎಸ್ ಆರ್ ಅನುದಾನದ ಡಿ ಮೇಲ್ದರ್ಜೆಗೆರುತ್ತಿರುವ ದೊಡ್ಡಿಂದುವಾಡಿಯ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ...

ಗೂಳಿಪುರ ಗ್ರಾಮದಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಅರಿವು ಮಾಜಿ ಸಚಿವ ಎನ್ ಮಹೇಶ್ ಭಾಗಿ

ಇಮೇಜ್
  ವರದಿ:ಗೂಳಿಪುರ ಮಣಿಕಂಠನಾಯಕ ಗೂಳಿಪುರ ಗ್ರಾಮದಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಅರಿವು ಮಾಜಿ ಸಚಿವ ಎನ್ ಮಹೇಶ್ ಭಾಗಿ ಯಳಂದೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೂಳಿಪುರ ಗ್ರಾಮದಲ್ಲಿ ನಡೆದ ಎಸ್‌ಐಆರ್ (Special Intensive Revision) ಪ್ರಕ್ರಿಯೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಎನ್ ಮಹೇಶ್ ಭಾಗವಹಿಸಿ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಎಸ್‌ಐಆರ್ ಪ್ರಕ್ರಿಯೆಯ ಮಹತ್ವ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸುವ ವಿಧಾನ ಕುರಿತು ಮಾಹಿತಿ ನೀಡಲಾಯಿತು. ಅರ್ಹ ಮತದಾರರು ತಪ್ಪದೇ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ನೋಂದಣಿಯಾಗುವಂತೆ ಕ್ರಮವಹಿಸಬೇಕು ಎಂದು ಅವರು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಬಿಜೆಪಿ ಮುಖಂಡರು ಮೋಹನ್, ಮಹದೇವಸ್ವಾಮಿ,ಉಮೇಶ್, ಗಜೇಂದ್ರ, ಮತಾಪ್ (ಮಧು), ಚಂದ್ರು, ವೆಂಕಟೇಶ್, ಶೇಖ, ಬಿ ಎಲ್ ಓ ಮಂಜುಳ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಸಲ್ಲಿಸಿದರು. ಬಳಿಕ ಗ್ರಾಮಸ್ಥರೊಂದಿಗೆ ಚರ್ಚಿಸಿ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸ...

ಗೂಳಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ ಯಶಸ್ವಿ

ಇಮೇಜ್
  ಗೂಳಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ ಯಶಸ್ವಿ ಚಾಮರಾಜನಗರ: ತಾಲ್ಲೂಕಿನ ಗೂಳಿಪುರ ಗ್ರಾಮದ ಶ್ರೀ ವಿ. ಮಹಾಂತದೇವರ ಸರ್ಕಾರಿ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಸತ್ ಚುನಾವಣೆ ಪ್ರಜಾಪ್ರಭುತ್ವದ ಮಾದರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಚುನಾವಣೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಮತ ಚಲಾಯಿಸಿದರು. ಮತದಾರರ ಪಟ್ಟಿಯ ಪರಿಶೀಲನೆ, ಮತದಾನ, ಮತಪೆಟ್ಟಿಗೆ ಬಳಕೆ ಹಾಗೂ ಮತ ಎಣಿಕೆ ಸೇರಿದಂತೆ ಚುನಾವಣೆಯ ಎಲ್ಲಾ ಹಂತಗಳನ್ನು ಚುನಾವಣಾ ನಿಯಮಾವಳಿಯಂತೆ ನಡೆಸಲಾಯಿತು. ವಿದ್ಯಾರ್ಥಿಗಳು ಮತದಾನದ ಮಹತ್ವವನ್ನು ಅರಿತು ಶಿಸ್ತಿನಿಂದ ತಮ್ಮ ಹಕ್ಕನ್ನು ಚಲಾಯಿಸಿದರು. ಮತ ಎಣಿಕೆ ಬಳಿಕ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳನ್ನು ಘೋಷಿಸಲಾಯಿತು. ಈ ಮೂಲಕ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಜವಾಬ್ದಾರಿಯ ಮನೋಭಾವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶವನ್ನು ಶಾಲೆ ಯಶಸ್ವಿಯಾಗಿ ಸಾಕಾರಗೊಳಿಸಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಚುನಾವಣಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಜಾಪ್ರಭುತ್ವದ ವ್ಯವಸ್ಥೆಯ ಬಗ್ಗೆ ಪ್ರಾಯೋಗಿಕ ಅನುಭವ ಪಡೆದರು. ನಿಮ್ಮ ಧ್ವನಿ ನಮ್ಮ ಸುದ್ದಿ 📢 G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9...

ಸಿಮ್ಸ್ ಮೆದುಳು ಆರೋಗ್ಯ ಕೇಂದ್ರದಲ್ಲಿ ಭೌತಚಿಕಿತ್ಸೆ ಸಲಕರಣೆ ಸಾರ್ವಜನಿಕ ಸೇವೆಗೆ ಸಮರ್ಪಣೆ

ಇಮೇಜ್
ವರದಿ: ಗೂಳಿಪುರ ಮಣಿಕಂಠ ನಾಯಕ್  ಸಿಮ್ಸ್ ಮೆದುಳು ಆರೋಗ್ಯ ಕೇಂದ್ರದಲ್ಲಿ ಭೌತಚಿಕಿತ್ಸೆ ಸಲಕರಣೆ ಸಾರ್ವಜನಿಕ ಸೇವೆಗೆ ಸಮರ್ಪಣೆ ಚಾಮರಾಜನಗರ, ಜುಲೈ 17 (ಕರ್ನಾಟಕ ವಾರ್ತೆ):- ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿರುವ ಮೆದುಳು ಆರೋಗ್ಯ ಕೇಂದ್ರಕ್ಕೆ (ಬಿಎಚ್‍ಸಿ) ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಂಸ್ಥೆಯಿಂದ ಕೊಡುಗೆ ನೀಡಿರುವ ಭೌತಚಿಕಿತ್ಸೆಯ ಸಲಕರಣೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಕುಮಾರ್ ಅವರು ಚಾಲನೆ ನೀಡಿದರು.         ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿ ಸಿಮ್ಸ್ ನಲ್ಲಿ ನರರೋಗಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ಸಲುವಾಗಿ ಸ್ಥಾಪಿಸಲಾಗಿರುವ ಮೆದುಳು ಆರೋಗ್ಯ ಕೇಂದ್ರಕ್ಕೆ ನೀಡಲಾಗಿರುವ ಭೌತಚಿಕಿತ್ಸೆಯ ಸಲಕರಣೆಗಳನ್ನು ಆರೋಗ್ಯಾಧಿಕಾರಿಗಳು ಟೇಪ್ ಕತ್ತರಿಸುವ ಮೂಲಕ ಸಾರ್ವಜನಿಕರ ಉಚಿತ ಸೇವೆಗೆ ಸಮರ್ಪಿಸಿದರು.          ಇದೇ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಕುಮಾರ್ ಅವರು ತಲೆನೋವು, ಅಪಸ್ಮಾರ, ಬುದ್ಧಿಮಾಂದ್ಯತೆ ಮತ್ತು ಪಾಶ್ರ್ವವಾಯುನಂತಹ ನಾಲ್ಕು ಪ್ರಮುಖ ನರ ವೈಜ್ಞಾನಿಕ ಸಮಸ್ಯೆಗಳನ್ನು ಪರಿಹರಿಸಲು ಭೌತಚಿಕಿತ್ಸೆಯ ಸಲಕರಣೆಗಳು ನೆರವಾಗಲಿದೆ. ರೋಗಿಯ ಫಲಿತಾಂಶಗಳನ್ನು ಸುಧಾರಿಸಲು ಆರಂಭಿಕ ಗುರುತಿಸುವಿಕೆ, ಸಕಾಲಿಕ ಚಿಕಿತ್ಸೆ ಮತ್ತು ಟೆಲಿ ನರಶ...

ಗಣಿಗನೂರು ಸುರೇಶ್‌ಗೆ ರಾಷ್ಟ್ರಮಟ್ಟದ ಜಾನಪದ ಕಣ್ಮಣಿ ಪ್ರಶಸ್ತಿ

ಇಮೇಜ್
  ವರದಿ: ಗೂಳಿಪುರ ಮಣಿಕಂಠ ನಾಯಕ್  ಗಣಿಗನೂರು ಸುರೇಶ್‌ಗೆ ರಾಷ್ಟ್ರಮಟ್ಟದ ಜಾನಪದ ಕಣ್ಮಣಿ ಪ್ರಶಸ್ತಿ ಯಳಂದೂರು: ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ ಆಯೋಜಿಸಿದ್ದ 125ನೇ ಬೆಳಕು ಸಮ್ಮೇಳನದಲ್ಲಿ ಯಳಂದೂರು ತಾಲ್ಲೂಕಿನ ಗಣಿಗನೂರು ಸುರೇಶ್ ಅವರಿಗೆ ರಾಷ್ಟ್ರಮಟ್ಟದ ಜಾನಪದ ಕಣ್ಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕು ಗಣಿಗನೂರು ಗ್ರಾಮದ ಶ್ರೀ ಡಿ. ಸುರೇಶ್ ರವರು ಜಾನಪದ ಗಾಯಕರಾಗಿ ಮತ್ತು ಚಿತ್ರ ಬರಹಗಾರರಾಗಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಜಾನಪದ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಯಿತು. 12-07-2026 ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. G1 NEWS ವತಿಯಿಂದ ಸುರೇಶ್‌ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು 💐💐💐💐💐 ನಿಮ್ಮ ಧ್ವನಿ ನಮ್ಮ ಸುದ್ದಿ 📢 G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏