ಪೋಸ್ಟ್‌ಗಳು

ಒಂದು ಮತ ಕ್ಷೇತ್ರಕ್ಕೆ ಅನ್ಯಾಯ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

1 ಮತಕ್ಕೆ ರಾಷ್ಟ್ರಮಟ್ಟದಲ್ಲಿ ಸುದ್ದಿ, ಆದ್ರೆ ಬಸ್ ಸ್ಟ್ಯಾಂಡ್ ಮಾತ್ರ ಇಲ್ಲ!

ಇಮೇಜ್
ವರದಿ:ಗುರುರಾಜ್ ತೆಳ್ಳನೂರು  ಚಾಮರಾಜನಗರ: ತಾಲ್ಲೂಕಿನ ಸಂತೇಮರಹಳ್ಳಿಯು 1962 ರಲ್ಲಿ ಸಂತೇಮರಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರವಾಗಿ ಉದಯವಾಯಿತು. ರಾಜ್ಯ ರಾಜಕೀಯದಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಈ ಕ್ಷೇತ್ರ 2008 ರಲ್ಲಿ ಕೇವಲ ಒಂದು ಮತದ ಅಂತರದ ಫಲಿತಾಂಶ ನೀಡಿ ಇಡೀ ದೇಶವೇ ತಿರುಗಿ ನೋಡುವ ಹಾಗೆ ಮಾಡಿತ್ತು. ಅಷ್ಟು ಮಹತ್ವದ ಕ್ಷೇತ್ರ ಇದಾಗಿದೆ. 1962 ರಿಂದ 2026 ರವರೆಗೆ ಹಲವಾರು ಘಟಾನುಘಟಿ ಶಾಸಕರನ್ನು ಕೊಡುಗೆಯಾಗಿ ನೀಡಿದ ಹೆಗ್ಗಳಿಕೆ ಈ ಕ್ಷೇತ್ರಕ್ಕಿದೆ. ಆದರೆ ಅಭಿವೃದ್ಧಿಯ ವಿಚಾರಕ್ಕೆ ಬಂದಾಗ ಮಾತ್ರ ಈ ಕ್ಷೇತ್ರ ಇಂದಿಗೂ ಹಿಂದೆಯೇ ಉಳಿದಿದೆ ಎಂಬುದು ಸ್ಥಳೀಯರ ಆರೋಪ. ಹೌದು ದಶಕಗಳ ಇತಿಹಾಸ ಹೊಂದಿರುವ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದಿಗೂ ಸುಸಜ್ಜಿತ ಬಸ್ ನಿಲ್ದಾಣವೇ ಇಲ್ಲ. ಇದು ಶಾಪವೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷವೋ ಎಂದರೆ ತಪ್ಪಾಗಲಾರದು. ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಇಲ್ಲಿಂದ ಚಾಮರಾಜನಗರ, ಮೈಸೂರು, ಬೆಂಗಳೂರು ಮತ್ತು ತಮಿಳುನಾಡಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. "ಸಂತೇಮರಹಳ್ಳಿ ಸರ್ಕಲ್" ಎಂದೇ ಪ್ರಖ್ಯಾತಿಯಾಗಿರುವ ಈ ಸ್ಥಳದಲ್ಲಿ ಬಿಸಿಲು, ಮಳೆ, ಚಳಿ, ಹಳ್ಳ ಕೊಳ್ಳ ಎನ್ನದೆ ಜನರು ರಸ್ತೆ ಬದಿಯಲ್ಲಿಯೇ ನಿಂತು ಬಸ್ ಗಾಗಿ ಕಾಯುವ ದುಸ್ಥಿತಿ ಇದೆ. ಮಹಿಳೆಯರು, ಮಕ್ಕಳು, ವೃದ್ಧರು ಪರದಾಡುವ ಪರಿಸ್ಥಿತಿ ಬಂದಿದೆ. ಸಂತೇಮರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ 33 ಎಕರೆಗೂ ಹೆಚ್ಚು ...