ಪೋಸ್ಟ್‌ಗಳು

ಹೊನ್ನೂರು ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಸಂತೇಮರಹಳ್ಳಿಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತ ಜನ ಸಂಪರ್ಕ ಸಭೆ: 24 ಗಂಟೆ ಸೇವೆಗೆ ಅಧಿಕಾರಿಗಳ ಭರವಸೆ, ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸಭೆಗೆ ರೈತ ಮುಖಂಡರ ಆಗ್ರಹ

ಇಮೇಜ್
CESC ಮುಖ್ಯ ಇಂಜಿನಿಯರ್ ಪ್ರದೀಪ್ ಸಾರ್ವಜನಿಕರ ಸಮಸ್ಯೆ ಆಲಿಸುತ್ತಿರುವುದು`  ಸಂತೇಮರಹಳ್ಳಿ, 16 ಜೂನ್ 2026 ರಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಸಂತೇಮರಹಳ್ಳಿ ಶಾಖಾ ಕಚೇರಿ ವತಿಯಿಂದ ಇಲ್ಲಿನ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಗೆ ಸಂತೇಮರಹಳ್ಳಿ ಸುತ್ತಲಿನ ಹೆಗ್ಗವಾಡಿಪುರ, ತೆಳ್ಳನೂರು, ಹೊನ್ನೂರು ಸೇರಿದಂತೆ ಹಲವು ಗ್ರಾಮಗಳ ರೈತರು ಹಾಗೂ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತಮ್ಮ ತಮ್ಮ ಊರಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರು **24 ಗಂಟೆ ಸೇವೆಗೆ ಭರವಸೆ ಸಭೆಯನ್ನುದ್ದೇಶಿಸಿ...**  ಇಪ್ಪತ್ತು ನಾಲ್ಕು ಗಂಟೆ ಸೇವೆಗೆ ಭರವಸೆ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಇಂಜಿನಿಯರ್ ಶ್ರೀ ಪ್ರದೀಪ್ ಅವರು, ಸಾರ್ವಜನಿಕರಿಗೆ ಯಾವುದೇ ರೀತಿಯ ವಿದ್ಯುತ್ ಸಮಸ್ಯೆಗಳಿದ್ದರೂ ನಮ್ಮ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ದಿನದ 24 ಗಂಟೆಯೂ ಸೇವೆ ಸಲ್ಲಿಸಲು ಸದಾ ಸಿದ್ಧರಾಗಿರುತ್ತಾರೆ. ತುರ್ತು ಸಂದರ್ಭದಲ್ಲಿ ನಮ್ಮ ಸಹಾಯವಾಣಿ 1912 ಗೆ ಕರೆ ಮಾಡಿ" ಎಂದು ತಿಳಿಸಿದರು. ಜೊತೆಗೆ, "ವಿದ್ಯುತ್ ತಂತಿಯಲ್ಲಿ ಏನಾದರೂ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡರೆ ಅಥವಾ ವಿದ್ಯುತ್ ಕಂಬ ಮುರಿದು ಬಿದ್ದರೆ, ಸಾರ್ವಜನಿಕರು ತಾವಾಗಿಯೇ ಸರಿಪಡಿಸುವ ಕೆಲಸಕ್ಕೆ ಕೈಹಾಕಬಾರದು" ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು. *ಮ...