ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದ ಬೇಗೂರು ಗ್ರಾಮದ ದರ್ಶಿತ್.ಎಸ್
ವರದಿ: ಲಕ್ಕೂರು ಚಂದ್ರು ಗುಂಡ್ಲುಪೇಟೆ: ಚನ್ನಪಟ್ಟಣದಲ್ಲಿ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ 2026 ರ ಕಥಾ ವಿಭಾಗದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದ ಪ್ರತಿಭೆ ದರ್ಶಿತ್ ಎಸ್ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಚೆಸ್ಕಾಂ ಸೋಮಣ್ಣ ಮತ್ತು ದೀಪ ದಂಪತಿಗಳ ಪುತ್ರನಾದ ದರ್ಶಿತ್ ಕಠಿಣ ತರಬೇತಿಯೊಂದಿಗೆ ಈ ಸಾಧನೆ ಮಾಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಸ್ಪರ್ಧಿಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನ ಪಡೆದು ಟ್ರೋಫಿ ಗೆದ್ದಿದ್ದಾರೆ. ಈ ಸಾಧನೆಗೆ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ದರ್ಶಿತ್ ಅವರ ಈ ಗೆಲುವು ಇಡೀ ತಾಲ್ಲೂಕಿಗೆ ಸ್ಪೂರ್ತಿಯಾಗಿದೆ. G1 ನ್ಯೂಸ್ ವತಿಯಿಂದ ದರ್ಶಿತ್ ಹಾಗೂ ಸಾಧನೆಗೆ ಸಹಕಾರ ನೀಡಿದ ಕುಟುಂಬಕ್ಕೆ ಅಭಿನಂದನೆಗಳು💐💐 ನಿಮ್ಮ ಧ್ವನಿ ನಮ್ಮ ಸುದ್ದಿ 📢 G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏